ವಿಜಯಪುರ ಅ 14 : ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ’ ಎಂಬ ಬರಹ ಹಾಗೂ ಶಾನಕ ಯತ್ನಾಳ ಅವರ ಭಾವಚಿತ್ರ ಇರುವ ಅಶ್ಲೀಲ ಪೋಸ್ಟ್ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಈ ಬಗ್ಗೆ ನಮ್ಮ ಕಾಂಗ್ರೆಸ್ ಇನಸ್ಟಾಗ್ರಾಮ್ನಲ್ಲಿ ಪೇಜ್ ನಲ್ಲಿಯೂ ಈ ಪೋಸ್ಟ್ ಹಾಕಲಾಗಿದ್ದು, ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಜೆಡಿಎಸ್ ಮಿಷನ್ 2023 ಎಂಬ ಪೇಸ್ಟುಕ್ ಅಕೌಂಟ್ನಲ್ಲಿಯೂ ಫೋಟೊ ಹರಿದಾಡುತ್ತಿದೆ. ಬಿಜೆಪಿ ನಾಯಕನ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಟ್ಯಾಗ್ಲೈನ್ ಹಾಕಲಾಗಿದೆ.
ಈ ಸಂಬಂಧ ಯತ್ನಾಳ್ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷಣ ಜಾಧವ್ ವಿಜಯಪುರದ ಸೈಬರ್ ( ಸಿಇಎನ್) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಾಸಕರಿಗೆ ಅವಮಾನ ಮಾಡಲಾಗಿದ್ದು ಶಾಸಕರದ್ದು ಎನ್ನಲಾದ ಭಾವಚಿತ್ರ ಮತ್ತು ಅಶ್ಲೀಲ ಬರಹ ಹರಿದಾಡುತ್ತಿದೆ ಈ ಬಗ್ಗೆ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.