ಯಡಿಯೂರಪ್ಪ ಅವರೇ ನೀವು ತಡೆಯಾಜ್ಞೆ ತರುವುದಿಲ್ಲವೇ: ಟ್ವೀಟ್ ಮೂಲಕ ಕಾಂಗ್ರೆಸ್ ಲೇವಡಿ

ಬೆಂಗಳೂರು, ಮಾ. 06: ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೊರಬರುತ್ತಿದ್ದಂತೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ತಳಮಳ ಶುರುವಾಗಿದ್ದು, 6 ಸಚಿವರು ತಮ್ಮ ವಿರುದ್ಧ ಸಾಕ್ಷ್ಯಾಧಾರ ಇಲ್ಲದ ಯಾವುದೇ ಸುದ್ದಿ ಪ್ರಕಟಿಸಬಾರದೆಂದು ಕೋರಿ ಬೆಂಗಳೂರಿನ ಸಿಟಿ
ಕೋರ್ಟ್’ನಿಂದ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಿದ್ದಾರೆ.

ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ. ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ತಮ್ಮ ವಿರುದ್ಧ ಪ್ರಸಾರಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿದ್ದಾರೆ.

ಈ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲೆಳೆದಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದಂತೆ ಕಣ್ಣಿನಲ್ಲಿ ನೋಡಲಾಗದಂತ ಸಿಡಿ ಇದೆಯಂತೆ. ಬಿ.ಎಸ್. ಯಡಿಯೂರಪ್ಪ ಅವರೇ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

Exit mobile version