• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

‘ಕೈ’ ಬಿಟ್ಟ ಮತದಾರ, ಬಿಜೆಪಿಗೆ ‘ವರ’ವಾದ ಯೋಗಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
yogi
0
SHARES
0
VIEWS
Share on FacebookShare on Twitter


ಪಂಚರಾಜ್ಯಗಳ ಚುನಾವಣಾ ಮತಎಣಿಕೆ ಪ್ರಾರಂಭವಾಗಿದೆ. ಈಗಾಗಲೇ ಬಹುತೇಕ ಕಡೆ 5ನೇ ಸುತ್ತಿನ ಮತಎಣಿಕೆ ಪ್ರಾರಂಭವಾಗಿದ್ದು, ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಪಂಜಾಬನಲ್ಲಿ ಮತದಾರ ‘ಕೈ’ ಬಿಟ್ಟಿರುವ ಸೂಚನೆ ಸಿಗುತ್ತಿವೆ. ಇನ್ನು ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಇಲ್ಲಿಯೂ ಕೊನೆಯ ಕ್ಷಣದಲ್ಲಿ ಏನಾಗಲಿದೆ ಎಂಬುದನ್ನು ಈಗಲೇ ಊಹಿಸಲು ಸಾಧ್ಯವಿಲ್ಲ.

ಪಂಚರಾಜ್ಯಗಳ ಮತ ಎಣಿಕೆಯ ಆರಂಭಿಕ ಅಂಕಿಅಂಶಗಳನ್ನು ಗಮನಿಸಿದರೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕ್ಕಾರಕ್ಕೇರುವ ಸೂಚನೆಗಳಿವೆ. ಆದರೆ ಸ್ಪಷ್ಟ ಬಹುಮತ ಕಷ್ಟವಾಗಬಹುದು. ಅಖಿಲೇಶ್ ಯಾದವ ನೇತೃತ್ವದ ಸಮಾಜವಾದಿ ಪಕ್ಷ ಕಳೆದ ಬಾರಿಗಿಂತ ಈ ಬಾರಿ ಉತ್ತಮ ಪೈಪೋಟಿ ನೀಡುತ್ತಿದೆ. ಯೋಗಿ ನೇತೃತ್ವದಲ್ಲಿ ಬಿಜೆಪಿ ಈ ಚುನಾವಣೆಯನ್ನು ಎದುರಿಸುತ್ತಿದ್ದು, ಯೋಗಿ ಆದಿತ್ಯನಾಥರ ವೈಯಕ್ತಿಕ ವರ್ಚಸ್ಸಿಗೆ ಈ ಚುನಾವಣೆ ಸವಾಲಾಗಲಿದೆ.

YOGI

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸ್ಪಷ್ಟ ಬಹುಮತದೊಂದಿಗೆ ಗೆದ್ದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೆಹಲಿ ಗದ್ದುಗೆ ಏರುವುದು ಸುಲಭವಾಗಲಿದೆ. ಅದೇ ರೀತಿ ಹಿಂದುತ್ವದ ಮುಖವಾಣಿಯಾಗಿರುವ ಯೋಗಿ ವರ್ಚಸ್ಸು ರಾಷ್ಟ್ರಮಟ್ಟದಲ್ಲಿಯೂ ವೃದ್ದಿಸಲಿದೆ. ಸ್ಪಷ್ಟ ಬಹುಮತ ದೊರೆಯದಿದ್ದರೆ ಬಿಎಸ್‍ಪಿ ಸೇರಿದಂತೆ ಕೆಲ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಅನಿವಾರ್ಯವಾಗಲಿದೆ. ಆಗ ಯೋಗಿ ವರ್ಚಸ್ಸು ಕುಗ್ಗಲಿದೆ.

ಇನ್ನು ಪಂಜಾಬ್‍ನಲ್ಲಿ ಎಎಪಿ ಅಧಿಕಾರಕ್ಕೇರುವ ಸ್ಪಷ್ಟ ಸೂಚನೆಗಳು ಸಿಗುತ್ತಿವೆ. ಭಗವಂತ್ ಮಾನ್ ನೇತೃತ್ವದಲ್ಲಿ ಎಎಪಿ ಪಂಜಾಬ್‍ನಲ್ಲಿ ಉತ್ತಮ ಸಾಧನೆ ತೋರುತ್ತಿದೆ. ಪಂಜಾಬ್‍ನಲ್ಲಿ ಬಿಜೆಪಿ ಲೆಕ್ಕಕ್ಕಿಲ್ಲ. ಆದರೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ. ಪಕ್ಷದ ಒಳಜಗಳಗಳು, ಸಂಘಟನೆಯಲ್ಲಿ ಬಿರುಕು, ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಪಕ್ಷದ ವಿರುದ್ದ ಕೆಲಸ ಮಾಡಿದೆ. ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅಮೃತಸರ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಸೋಲುವ ಭೀತಿ ಆವರಿಸಿದೆ.


ಇನ್ನೊಂದೆಡೆ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಲಕ್ಷಣಗಳು ಗೋಚರಿಸುತ್ತಿವೆ. ಆದರೆ ಬಿಜೆಪಿ ಕೊನೆ ಕ್ಷಣದಲ್ಲಿ ಪಕ್ಷೇತರ ಮತ್ತು ಇತರ ಪ್ರಾದೇಶಿಕ ಪಕ್ಷಗಳ ನೆರವಿನಿಂದ ಅಧಿಕಾರಕ್ಕೇರಿದರೆ ಅಚ್ಚರಿ ಪಡೆಬೇಕಿಲ್ಲ. ಹೀಗಾಗಿ ಕಾಂಗ್ರೆಸ್ ಬಹುಮತ ದೊರೆತಲ್ಲಿ, ವಿಳಂಬ ಮಾಡದೇ ಸರ್ಕಾರ ರಚನೆಗೆ ಮುಂದಾಗಲು ಬೇಕಾದ ಸಿದ್ದತೆ ನಡೆಸಿದೆ.

bjp

ಇನ್ನು ಉತ್ತರಾಖಂಡ ಮತ್ತು ಮಣಿಪುರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಬಿಜೆಪಿ ಈ ರಾಜ್ಯಗಳಲ್ಲಿ ಮತ್ತೇ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿದೆ. ಕಾಂಗ್ರೆಸ್ ನಿರೀಕ್ಷಿತ ಪೈಪೋಟಿ ನೀಡುತ್ತಿಲ್ಲ. ಈ ಎರಡು ರಾಜ್ಯಗಳಲ್ಲಿ ಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಒಟ್ಟಾರೆಯಾಗಿ ಪಂಚರಾಜ್ಯಗಳ ಆರಂಭಿಕ ಮತಎಣಿಕೆಯನ್ನು ಗಮನಿಸಿದರೆ, ಕಾಂಗ್ರೆಸ್ ನೇಪತ್ಯಕ್ಕೆ ಸರಿಯುತ್ತಿದೆ.

ಕಾಂಗ್ರೆಸ್ ಜಾಗದಲ್ಲಿ ಬಿಜೆಪಿಯನ್ನು ಎದುರಿಸಲು ಹೊಸ ಪ್ರಾದೇಶಿಕ ಶಕ್ತಿಗಳು ಉದಯಿಸುತ್ತಿವೆ. ಪಂಜಾಬ್‍ನಂತ ದೊಡ್ಡ ರಾಜ್ಯವನ್ನು ಕಾಂಗ್ರೆಸ್ ಕಳೆದುಕೊಂಡು, ಇದೀಗ ಎರಡು ಲೋಕಸಭಾ ಸ್ಥಾನಗಳಿರುವ ಸಣ್ಣ ರಾಜ್ಯ ಗೋವಾದಲ್ಲಿ ಅಧಿಕಾರ ಹಿಡಿಯಲು ಪರದಾಡುತ್ತಿದೆ.

Tags: Elections2022politicsupelectionsyogiadhityanath

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.