• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಉತ್ತರ ಗೆದ್ದ ‘ಯೋಗಿ’ಗೆ 2024ರ ದೆಹಲಿ ಗದ್ದುಗೆ?

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
up elections
0
SHARES
0
VIEWS
Share on FacebookShare on Twitter

ಉತ್ತರಪ್ರದೇಶದಲ್ಲಿ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮತ್ತೇ ಅಧಿಕಾರಕ್ಕೇರಿದೆ. ಆ ಮೂಲಕ ಸತತ ಎರಡು ಬಾರಿ ಅಧಿಕಾರಕ್ಕೇರಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇಲ್ಲಿಯವರೆಗೂ ಯಾವುದೇ ಮುಖ್ಯಮಂತ್ರಿ ಸತತ ಎರಡು ಬಾರಿ ಅಧಿಕಾರ ಹಿಡಿದ ಇತಿಹಾಸ ಉತ್ತರಪ್ರದೇಶದಲ್ಲಿಲ್ಲ. ಅಂತಹದೊಂದು ಹೊಸ ಇತಿಹಾಸವನ್ನು ಯೋಗಿ ಬರೆದಿದ್ದಾರೆ.

up elctions

ಇನ್ನು ಭಾರತದ ಅತ್ಯಂತ ಹೆಚ್ಚು ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶವನ್ನು ರಾಜಕೀಯವಾಗಿ ಗೆಲ್ಲುವುದು ಅತಿ ಮುಖ್ಯವಾಗಿದೆ. ಕೇಂದ್ರದಲ್ಲಿ ಅಧಿಕಾರ ಹಿಡಿಯಬೇಕಾದರೆ ಉತ್ತರಪ್ರದೇಶದಲ್ಲಿ ಮೊದಲು ಅಧಿಕಾರ ಹಿಡಿಯಬೇಕು. ಹೀಗಾಗಿಯೇ “ದೆಹಲಿ ಗದ್ದುಗೆಯ ಹಾದಿ, ಲಖನೌ ಮೂಲಕ ಹಾದು ಹೋಗುತ್ತದೆ” ಎಂಬ ಮಾತಿದೆ. ಈ ಸತ್ಯವನ್ನು ಅರಿತಿರುವ ಕೇಂದ್ರ ಬಿಜೆಪಿ ನಾಯಕರು ಸಾಕಷ್ಟು ಶ್ರಮವಹಿಸಿ ಉತ್ತರಪ್ರದೇಶದಲ್ಲಿ ಮತ್ತೇ ತಮ್ಮ ಅಧಿಪತ್ಯ ಸ್ಥಾಪಿಸಿದ್ದಾರೆ.

ಅಖಿಲೇಶ್ ಯಾದವ್ ಸಾಕಷ್ಟು ಪೈಪೋಟಿ ನೀಡಿದರು. ಉತ್ತರಪ್ರದೇಶವನ್ನು ಗೆದ್ದು ಬೀಗುವಲ್ಲಿ ಯೋಗಿ ಆದಿತ್ಯನಾಥ್ ಯಶಸ್ವಿಯಾಗಿದ್ದಾರೆ. ಇನ್ನು ಕಳೆದ ಬಾರಿ ಉತ್ತರಪ್ರದೇಶದಲ್ಲಿ ಬಿಜೆಪಿ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಚುನಾವಣೆ ಎದುರಿಸಿತ್ತು. ಆಗ ಉತ್ತರಪ್ರದೇಶದಲ್ಲಿ ಕಮಾಲ್ ಮಾಡಿದ್ದು, ಮೋದಿ ಮಾತ್ರ. ಹೌದು, 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೋದಿ ಮಾತ್ರ ಸ್ಟಾರ್ ಪ್ರಚಾರಕರಾಗಿ ಕಾಣಿಸಿಕೊಂಡಿದ್ದರು. ಮತದಾರರು ಮೋದಿ ಮುಖ ನೋಡಿ ಮತ ಚಲಾಯಿಸಿದ್ದರು. ಆದರೆ ಈ ಬಾರಿ ಮೋದಿ-ಯೋಗಿ ಜೋಡಿ ಕಮಾಲ್ ಮಾಡಿದೆ.

up elections

ಉತ್ತರಪ್ರದೇಶದಲ್ಲಿ ‘ಬುಲ್ಡೋಜರ್ ಬಾಬಾ’ ಎಂದೇ ಖ್ಯಾತಿ ಗಳಿಸಿರುವ ಯೋಗಿ ಆಡಳಿತಕ್ಕೆ ಮತದಾರರು ಜೈ ಎಂದಿದ್ದಾರೆ. ತಮ್ಮ ಪ್ರಕಾರ ಹಿಂದುತ್ವ, ಭ್ರಷ್ಟಾಚಾರ ರಹಿತ ಆಡಳಿತ, ಯಾವುದೇ ಒತ್ತಡಗಳಿಗೆ ಒಳಗಾಗದೇ ಕಾರ್ಯನಿರ್ವಹಿಸುವ ಯೋಗಿ ಮಾತಿಗೆ ಮತದಾರರು ಬಹುಪರಾಕ್ ಹೇಳಿದ್ದಾರೆ. ಉತ್ತರದ ಗದ್ದುಗೆ ಹಿಡಿಯುತ್ತಲೇ, ಯೋಗಿ ಆದಿತ್ಯನಾಥ್‍ರ ವರ್ಚಸ್ಸು ಇಡೀ ರಾಷ್ಟ್ರಮಟ್ಟದಲ್ಲಿ ಇಮ್ಮಡಿಯಾಗಿದೆ. ಇನ್ನು 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಿಂದ ಮೋದಿ ಹಿಂದೆ ಸರಿದರೆ, ‘ಮೋದಿ’ಗೆ ಪರ್ಯಾಯ ನಾಯಕನಾಗಿ ‘ಯೋಗಿ’ ಉದಯಿಸಿದ್ದಾರೆ.

Narendra modi

ಈಗಾಗಲೇ ಅಂತಹದೊಂದು ವೇದಿಕೆಯೂ ರೂಪಗೊಳ್ಳುತ್ತಿದೆ. ರಾಷ್ಟ್ರಮಟ್ಟದಲ್ಲಿ ಯೋಗಿ ಹಿಂದೂ ಮತಬ್ಯಾಂಕ್‍ನ್ನು ಒಗ್ಗೂಡಿಸುವ ವರ್ಚಸ್ಸು ಹೊಂದಿದ್ದಾರೆ. ಸದ್ಯ ಕೇಂದ್ರ ಬಿಜೆಪಿಯಲ್ಲಿ ಮೋದಿ-ಅಮಿತ್ ಶಾ ಜೋಡಿ ಬಿಟ್ಟರೆ, ಯೋಗಿ ಹೆಚ್ಚು ಪ್ರಬಲರಾಗಿ ಕಾಣುತ್ತಾರೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಯೋಗಿಗೆ ದಕ್ಕಿರುವ ಈ ಗೆಲುವು, ಅವರನ್ನು ದೆಹಲಿ ಗದ್ದುಗೆಯ ಸನಿಹಕ್ಕೆ ತೆಗೆದುಕೊಂಡು ಹೋಗಬಹುದು. ಕಾವಿಧಾರಿಯೊಬ್ಬ ಪ್ರಧಾನಿ ಗದ್ದುಗೆ ಅಲಂಕರಿಸಿದರೆ ಅಚ್ಚರಿ ಪಡಬೇಕಿಲ್ಲ.

Tags: #UPElections2022bjppoliticalyogiadityanath

Related News

ರಾಹುಲ್‌ಗಾಂಧಿ ಅನರ್ಹತೆ ಕುರಿತು ಕಾನೂನು ಏನು ಹೇಳುತ್ತದೆ..?
ರಾಜಕೀಯ

ರಾಹುಲ್‌ಗಾಂಧಿ ಅನರ್ಹತೆ ಕುರಿತು ಕಾನೂನು ಏನು ಹೇಳುತ್ತದೆ..?

March 26, 2023
ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.