- ಪಾಕಿಸ್ತಾನ ಎಂದಿಗೂ ನಮ್ಮ ಶತ್ರು ರಾಷ್ಟ್ರ, ಮೋದಿ ಅವಕಾಶ ಕೊಟ್ಟರೆ ಯುದ್ಧ ಮಾಡ್ತೇನೆ
- ಮೋದಿ-ಷಾ ನನಗೆ ಅವಕಾಶ ಕೊಡಲಿ ಎಂದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್
- ಭಾರತ ಮತ್ತು ಪಾಕ್ ನಡುವೆ ಯುದ್ಧದ ವಾತಾವರಣ
Vijayanagara : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ (Pahalgam, Jammu and Kashmir) ನಡೆದ ಪೈಶಾಚಿಕ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ (Zameer Ahmed Khan Statement) ಭಾರತ ಪಾಕಿಸ್ತಾನದ ಮೇಲೆ (India over Pakistan) ಯಾವ ಕ್ರಮ ಕೈಗೊಳ್ಳಲಿದೆ ಅನ್ನೋ ಕುತೂಹಲ ಎಲ್ಲರಲ್ಲಿದೆ. ಇದರ ನಡುವೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Minister Zameer Ahmed Khan) ನೀಡಿರುವ ಹೇಳಿಕೆ ಗಮನಸೆಳೆದಿದೆ.
ನಾವು ಭಾರತೀಯರು, ಹಿಂದೂಸ್ತಾನಿಗಳು. ಪಾಕಿಸ್ತಾನ ಎಂದಿಗೂ ನಮ್ಮ ಶತ್ರು. ಪ್ರಧಾನಮಂತ್ರಿ ನರೇಂದ್ರ (Prime Minister Narendra) , ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ (War) ಹೋಗಲು ಸಿದ್ಧನಿದ್ದೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದ್ದಾರೆ.
ಮಾತನಾಡಿದ ಅವರು, ನಾವು ಭಾರತೀಯರು, ನಾವು ಹಿಂದೂಸ್ತಾನಿಗಳು. ನಮಗೂ ಪಾಕಿಸ್ತಾನಕ್ಕೂ (Pakistan) ಯಾವ ಸಂಬಂಧಾನೂ ಇಲ್ಲ. ಯುದ್ಧ ಮಾಡಬೇಕು ಎಂದರೆ ನಾನು ರೆಡಿ (I am Ready) . ಮಂತ್ರಿಯಾಗಿ ನನ್ನನ್ನು ಕಳುಹಿಸುತ್ತಾರೆ ಎಂದರೆ ನಾನು ಸಿದ್ಧ. ಯುದ್ಧಕ್ಕೆ ನಾನು ಹೋಗುತ್ತೇನೆ. ದೇಶಕ್ಕಾಗಿ ಯುದ್ಧ (War for country) ಮಾಡಲು ನಾನು ರೆಡಿ.. ನಡೀರಿ ಹೋಗಿ ಬಿಡೋಣ ಎಂದು ಹೇಳಿದರು.ಈ ದೇಶಕ್ಕೋಸ್ಕರ ನಾನು ಯುದ್ಧಕ್ಕೆ ಹೋಗುತ್ತೇನೆ (I will go to war) .
ನಾನು ತಮಾಷೆಗೆ, ಜೋಶ್ನಲ್ಲಿ ಹೇಳುತ್ತಿಲ್ಲ. ಈ ದೇಶಕ್ಕೋಸ್ಕರ ಹೋಗುತ್ತೇನೆ, ನರೇಂದ್ರ ಮೋದಿ, ಅಮಿತ್ ಶಾ ಅವ್ರು ಶಸ್ತ್ರಾಸ್ತ್ರವನ್ನು ನನ್ನ ಕೈಗೆ ಕೊಡಲಿ. ಅಲ್ಲಾ ಮೇಲೆ ಆಣೆ, ಶಸ್ತ್ರಾಸ್ತ್ರವನ್ನು ಬೆನ್ನಲ್ಲಿ ಕಟ್ಟಿಕೊಂಡು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಲು ಹೋಗುತ್ತೇನೆಂದು ಎದೆ ತಟ್ಟಿ ತಟ್ಟಿ ಹೇಳಿದ್ದಾರೆ.

ಸಚಿವ ಶಿವಾನಂದ ಪಾಟೀಲ್ (Shivananda Patil) ಮತ್ತು ಯತ್ನಾಳ್ ರಾಜೀನಾಮೆ (Yatnal’s resignation) ಜಟಾಪಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ಯತ್ನಾಳ್ ಅವರು, ಯಾವಾಗಲೂ ದಮ್ಮು, ತಾಕತ್ತು ಅಂತ ಮಾತಾಡ್ತಾರೆ. ಪದೇ, ಪದೇ, ದಮ್ಮು ತಾಕತ್ತು (Dammu Takattu) ಬಗ್ಗೆ ಮಾತನಾಡುತ್ತಾರೆ. ಸಚಿವ ಶಿವಾನಂದ ಪಾಟೀಲ್, ದಮ್ಮು ತಾಕತ್ತು ತೋರಿಸಿದ್ದಾರೆ.
ಅವರಪ್ಪಗೆ ಹುಟ್ಟಿದವರಾದ್ರೆ, ರಾಜೀನಾಮೆ ಕೊಟ್ಟು ಬರಲಿ ಅಂತ ಯತ್ನಾಳ್ ಹೇಳಿದ್ದರು. ಶಿವಾನಂದ್ ಪಾಟೀಲ್ ರಾಜಿನಾಮೆ (Shivanand Patil resigns) ಕೊಟ್ಟು ಅವರಪ್ಪಗೆ ಹುಟ್ಟಿದ್ದಾರೆ ಅಂತ ತೋರಿಸಿದ್ದಾರೆ. ಅದೇ ಯತ್ನಾಳ್ ರಾಜೀನಾಮೆ ನೀಡಿ, ಅವರಪ್ಪಗೆ ಹುಟ್ಟಿದ್ದಾರೆ ಅಂತ ತೋರಿಸಲಿ ಎಂದು ಜಮೀರ್ ಅಹ್ಮದ್ ಖಾನ್ (Zameer Ahmed Khan) ಸವಾಲು ಹಾಕಿದ್ದಾರೆ. ಇನ್ನು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊ* ಪ್ರಕರಣದ ಬಗ್ಗೆ ಮಾತನಾಡಿದ ಅವರು. ಈಗಾಗಲೇ ಕೊಲೆಯಾಗಿದೆ, ಕೊಲೆಯಾಗಬಾರದಾಗಿತ್ತು. ಸತ್ತಿರೋರು ಉತ್ತಮ ಚಾರಿತ್ರ್ಯ ವ್ಯಕ್ತಿಯಲ್ಲ, ರೌಡಿ ಶೀಟರ್ ಅಂತೆ. ಹಿಂದೆ ಕೊ* ಕೇಸ್ ನಲ್ಲಿದ್ರಂತೆ, ಪೊಲೀಸರು ತನಿಖೆ (Police are investigating) ಮಾಡುತ್ತಾರೆ.
ಇದನ್ನು ಓದಿ : http://ಕನ್ನಡ ಹಾಡು ಹೇಳಿ ಎಂದಿದಕ್ಕೇನೆ ಪಹಲ್ಗಾಮ್ ದಾಳಿ ನಡೆದಿದ್ದು : ಉದ್ಧಟತನದ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್
ಪ್ರತಿಯೊಬ್ಬರ ಜೀವವೂ ಅಮೂಲ್ಯವೇ , ಕೊಲೆಯಾಗಬಾರದಾಗಿತ್ತು. ಬಿಜೆಪಿಯವರಿಗೆ (BJP) ಎಲ್ಲದರಲ್ಲೂ ರಾಜಕಾರಣ. (Zameer Ahmed Khan Statement) ಅವರು ಜಾತಿ ರಾಜಕಾಣರ ಮನೆಯಲ್ಲಿ ಮಾಡಿಕೊಳ್ಳಲಿ, ರಾಜಕೀಯದಲ್ಲಿ ಬಂದು ಮಾಡಬಾರದು ಎಂದು ಹೇಳಿದ್ದಾರೆ.