Hubballi: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಯಲ್ಲಿದ್ದು, (Zameer ahmed slams bjp) ಸಂಸತ್ ಒಳಗೆ ಹೋಗಲು ಅನೇಕ ಪ್ರಕ್ರಿಯೆಗಳಿವೆ ಹಾಗಿರುವಾಗ
ಆ ಹುಡುಗರು ಸಂಸತ್ (Parliament) ಒಳಗೆ ಹೇಗೆ ಹೋದರು? ಇನ್ನು ರಾಜ್ಯದ ಮುಖ್ಯಮಂತ್ರಿಯೇ ಪ್ರಧಾನಿಯನ್ನು ಭೇಟಿ ಮಾಡಬೇಕಾದರೆ ಅನೇಕ ನಿಯಮಗಳನ್ನು ಪಾಲಿಸಬೇಕು. ಸಚಿವನಾಗಿಯೇ
ನಾನೆ ಇನ್ನು ಲೋಕಸಭೆಗೆ ಹೋಗಲು ಆಗಿಲ್ಲ. ಎಂದು ಸಚಿವ (Zameer ahmed slams bjp) ಜಮೀರ್ ಅಹಮದ್ ಪ್ರಶ್ನಿಸಿದ್ದಾರೆ.
ಸ್ಮೋಕ್ ಬಾಂಬ್ (Smoke Bomb) ದಾಳಿ ವಿಚಾರವಾಗಿ ಧಾರವಾಡದಲ್ಲಿ ಸಚಿವ ಜಮೀರ್ ಅಹ್ಮದ್ ಅವರು ತಿರುಗೇಟು ನೀಡಿದ್ದು, ಇದು ಕಾಂಗ್ರೆಸ್ ಕುತಂತ್ರ ಎಂದು ಆರೋಪಗಳ ಬಗ್ಗೆ ಮಾತನಾಡಿದ ಅವರು
ಇದರಲ್ಲಿ ಕಾಂಗ್ರೆಸ್ ಕುತಂತ್ರ ಹೇಗಿರುತ್ತೆ? ಅವರಿಗೆ ಪಾಸ್ ಕೊಟ್ಟವರು ಯಾರು? ಇದರಲ್ಲಿ ರಾಜಕೀಯ ಮಾತನಾಡಲು ನಾನು ಇಷ್ಟಪಡುವುದಿಲ್ಲ. ಇದರಲ್ಲಿ ಭದ್ರತಾ ವೈಫಲ್ಯ (Security failure) ಆಗಿದೆ.
ಆತ ಪ್ರೇಕ್ಷಕರ ಗ್ಯಾಲರಿ (Audience Gallery) ಮೇಲಿಂದ ಜಂಪ್ ಹೊಡೆದಿದ್ದಾರೆ.
ಹೀಗಾದರೆ ಸೆಕ್ಯೂರಿಟಿ ವ್ಯವಸ್ಥೆ ಹೇಗಿದೆ ಅಲ್ಲಿ? ಸಂಸತ್ನಲ್ಲಿ ಒಳಗೆ ಹೋಗಲು ಹತ್ತಾರು ಪ್ರಕ್ರಿಯೆ ಇದೆ. ಮಂತ್ರಿ, ಎಂಎಲ್ಗಳು ಸಂಸತ್ಗೆ ಹೋಗಲು ಅನೇಕ ಪ್ರಕ್ರಿಯೆ ಇವೆ. ಹಾಗಾದರೆ ಆ ಹುಡುಗರು
ಹೇಗೆ ಒಳಗೆ ಹೋದರು? ರಾಜ್ಯದ ಮುಖ್ಯಮಂತ್ರಿಗಳೇ ಪ್ರಧಾನಿ ಭೇಟಿಯಾಗಬೇಕಾದರೂ ಅನೇಕ ಪ್ರಕ್ರಿಯೆ ಇವೆ. ಸಚಿವನಾಗಿ ನಾನೇ ಇನ್ನೂ ಲೋಕಸಭೆಗೆ ಹೋಗಲು ಆಗಿಲ್ಲ. ಹಾಗಾದರೆ ಇವರು ಹೇಗೆ
ಹೋದರು? ಅಂತಾ ಅವರು ಪ್ರಶ್ನಿಸಿದ್ದಾರೆ.
ಅನಿಲ್ ಕುಮಾರ್ ಪಾಟೀಲ್ ಮನೆಯಲ್ಲಿ ಜಮೀರ್ ಅಹ್ಮದ್:
ಇತ್ತೀಚಿಗೆ ಪಾಟೀಲ್ ಅವರು ತಮ್ಮ ಮಗ ಅರ್ಜುನ್ ಮದುವೆ ಕಾರ್ಯ ನೆರವೇರಿಸಿದ್ದರು. ಜಮೀರ್ ಅವರಿಗೆ ಲಗ್ನದಲ್ಲಿ ಭಾಗವಹಿಸುವುದು ಸಾಧ್ಯವಾಗಿರಲಿಲ್ಲವಂತೆ. ಹಾಗಾಗಿ, ಇಂದು ಪಾಟೀಲ್ ಮನೆಗೆ
ಭೇಟಿ ನೀಡಿ ನವವಿವಾಹಿತರಿಗೆ ಶುಭ ಹಾರೈಸುವುದರ ಜೊತೆಗೆ ವರನಿಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಜನರು ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ.
ಜನ ಈಗ ತೀರ್ಮಾನ ತೆಗೆದುಕೊಂಡು ಆಗಿದೆ. ರಾಜ್ಯದಲ್ಲಿ ಕನಿಷ್ಠ 25 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ.
ಮೂರು ಕ್ಷೇತ್ರದಲ್ಲಿ ಮುಸಲ್ಮಾನರಿಗೆ ಟಿಕೆಟ್ ಕೇಳಿದ್ದೇವೆ. ಬೆಂಗಳೂರು ಸೆಂಟ್ರಲ್, ಹಾವೇರಿ, ಬೀದರ್ ಕ್ಷೇತ್ರದ ಟಿಕೆಟ್ ಕೇಳಿದ್ದೇವೆ ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದರು.
ಇದನ್ನು ಓದಿ: ಸಂಸತ್ ಸ್ಮೋಕ್ ಬಾಂಬ್ ಪ್ರಕರಣ: ಈ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಪೋಲೀಸರ ಬಲೆಗೆ
- ಭವ್ಯಶ್ರೀ ಆರ್ ಜೆ