• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾನ್ಪುರದಲ್ಲಿ 89 ಮಂದಿಗೆ ಕಾಣಿಸಿಕೊಂಡ ಝೀಕಾ ವೈರಸ್‌

Preetham Kumar P by Preetham Kumar P
in ದೇಶ-ವಿದೇಶ
ಕಾನ್ಪುರದಲ್ಲಿ 89 ಮಂದಿಗೆ ಕಾಣಿಸಿಕೊಂಡ ಝೀಕಾ ವೈರಸ್‌
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶದ ಕಾನ್ಪುರದಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದೆ. ಸೊಳ್ಳೆಯಿಂದ ಹರಡುವ ಈ ರೋಗವು ಈಗಾಗಲೇ 89 ಜನರಲ್ಲಿ ಪತ್ತೆಯಾಗಿದ್ದು, ಇವರಲ್ಲಿ 17 ಜನ ಮಕ್ಕಳು ಹಾಗೂ ಒಬ್ಬಾಕೆ ಗರ್ಭಿಣಿಯಾಗಿದ್ದಾರೆ. ವಿರಳಾತಿವಿರಳ ನರ ಸಂಬಂಧಿ ಕಾಯಿಲೆಗೂ ಕಾರಣವಾಗುವ ಈ ವೈರಸ್,80% ಜನರಲ್ಲಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸುವುದಿಲ್ಲ. ಉಳಿದವರಲ್ಲಿ ಸಾಮಾನ್ಯ ಜ್ವರ ಹಾಗೂ ಮೈ ಕೈ ನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. 

ಅಕ್ಟೋಬರ್ 23ರಂದು ಕಾನ್ಪುರದಲ್ಲಿ ಮೊದಲನೇ ಝೀಕಾ ವೈರಸ್ ಪ್ರಕರಣ ಪತ್ತೆಯಾಗಿತ್ತು. ಕಳೆದ ವಾರದಿಂದ ಈ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಆತಂಕದ ಸಂಗತಿ ಏನೆಂದರೆ, ಕಾನ್ಪುರದಿಂದ 90 ಕಿ.ಮೀ. ದೂರ ಇರುವಂತಹ ಕನೌಜ್ ಎಂಬಲ್ಲಿಯೂ ಝೀಕಾ ವೈರಸ್ ಪತ್ತೆಯಾಗಿದ್ದು, ಇದು ಮತ್ತಷ್ಟು ಪ್ರದೇಶಗಳಿಗೆ ಹರಡಿರಬಹುದಾದ ಸಂದೇಹವನ್ನು ಸೃಷ್ಟಿಸಿದೆ. 

ಡೆಂಘಿ ಹಾಗೂ ಚಿಕುನ್ ಗುನ್ಯಾ ರೋಗಾಣು ವಾಹಕವಾದ ಈಡೀಸ್ ಈಜಿಪ್ಟೀ ಎಂಬ ವಿಧದ ಸೊಳ್ಳೆಗಳಿಂದ ಈ ರೋಗ ಹರಡುತ್ತದೆ. ನಿಂತ ನೀರಿನಲ್ಲಿ ಈ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. 

ಸಾಮಾನ್ಯವಾಗಿ ಯಾವುದೇ ರೋಗ ಲಕ್ಷಣಗಳನ್ನು ಹೊಂದಿರದಿದ್ದರೂ, ಒಂದು ವೇಳೆ ರೋಗವು ತೀವ್ರವಾದಲ್ಲಿ ಮುಂದೆ ಹುಟ್ಟುವ ಮಕ್ಕಳಲ್ಲಿ ದೋಷ ಉಂಟು ಮಾಡಬಲ್ಲದು, ಮಾತ್ರವಲ್ಲದೇ ನರಮಂಡಲದ ಮೇಲೆ ತೀವ್ರವಾದ ಪರಿಣಾಮವನ್ನು ಬೀರಬಲ್ಲದು. 

“ಝೀಕಾ ವೈರಸ್ ದೃಢಪಟ್ಟ ರೋಗಿಗಳಿಗೆ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪ್ರತಿದಿನ ಅವರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ರೋಗಿಗಳ ದೇಹವು ಚಿಕಿತ್ಸೆಗೆ ಯಾವ ರೀತಿ ಸ್ಪಂದಿಸುತ್ತಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ,” ಎಂದು ಜಿಲ್ಲಾಧಿಕಾರಿ ವಿಕಾಸ್ ಜಿ ಅವರು ಹೇಳಿದ್ದಾರೆ. 

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.