ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸಿದ್ದಾರೆ ..ಸಭೆಯಲ್ಲಿ ಕೊರೋನಾ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದ್ದು; ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ೧೦ ಸಾವಿರ ಬೆಡ್ ನೀಡೋ ವ್ಯವಸ್ಥೆ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದಾರೆ .
ಇದರ ಜೊತೆ ೨೮೦ ಅಬ್ಯುಲೆನ್ಸ್ ಖರೀದಿಯ ಜೊತೆ ೬೦೦ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ .. ಇನ್ನು ಕೆಲವು ಜಲ್ಲೆಗಳಲ್ಲಿ ಕೊರೋನಾ ವೈರಸ್ ಕೈ ಮೀರಿ ಜಾಸ್ತಿಯಾಗ್ತಿದೆ. ಅಂಥಕಡೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.. ಇದಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದೇನೆ .. ಅಲ್ಲಿ ವಿವರವಾಗಿ ಮಾಹಿತಿ ನೀಡುತ್ತೇನೆ ಎಂದು ಬಿಎಸ್ ವೈ ತಿಳಿಸಿದ್ದಾರೆ.